Posted on February 22, 2008 by neelanjana
ಪಲ್ಲವಿ:
ಶ್ರೀನಿವಾಸ ನೀನೇ ಪಾಲಿಸೋ ಶೃತಜನ ಪಾಲ
ಗಾನಲೋಲ ಶ್ರೀ ಮುಕುಂದನೇ
ಅನುಪಲ್ಲವಿ:
ಧ್ಯಾನ ಮಾಳ್ಪ ಸಜ್ಜನರ ಮಾನದಿಂ ಪರಿಪಾಲಿಪ
ವೇಣುಗೋಪಾಲ ಮುಕುಂದ ವೇದವೇದ್ಯ ನಿತ್ಯಾನಂದ
ಚರಣ:
1:
ಎಂದಿಗೆ ನಿನ್ನ ಪಾದಾಬ್ಜವ ಪೊಂದುವ ಸುಖ
ಎಂದಿಗೆ ಲಭ್ಯವೋ ಮಾಧವ
ಅಂಧಕಾರಣ್ಯದಲ್ಲಿ ನಾನು (?)
ನಿಂದು ತತ್ತರಿಸುತಿಹೆನೊ ಮುಕುಂದ
2:
ಎಷ್ಟು ದಿನ ಕಷ್ಟ ಪಡುವುದೋ ಯಶೋದೆ ಕಂದ
ದೃಷ್ಟಿಯಿಂದ ನೋಡಲಾಗದೆ
ಮುಟ್ಟಿ ನಿನ್ನ ಭಜಿಸಲಾರೆ ಕೆಟ್ಟ ನರಜನ್ಮದವ
ದುಷ್ಟ ಕಾರ್ಯ ಮಾಡಿದಾಗ್ಯು ಇಷ್ಟನಾಗಿ ಕಯ್ಯ ಪಿಡಿದು
3:
ಅನುದಿನ ಅನೇಕ ರೋಗಂಗಳ ಅನುಭವಿಸುವೆನು
ಘನ ಮಹಿಮನೆ ಕೇಳಯ್ಯ ತನುವಿನಲ್ಲಿ ಬಲವಿಲ್ಲ
ನೆನೆದ ಮಾತ್ರ ಸಲಹುವ
ಹನುಮದೀಶ ಪುರಂದರ ವಿಟ್ಠಲನೇ ಕಯ್ಯ ಪಿಡಿದು
Filed under: ಶ | Tagged: ಶ | Leave a Comment »
Posted on February 22, 2008 by neelanjana
ಬೆಲ್ಲದ ಕಟ್ಟೆಯ ಕಟ್ಟಿ ಬೇವಿನ ಬೀಜವ ಬಿತ್ತಿ
ಜೇನು ಮಳೆಗರೆದರೆ ವಿಷ ಹೋಗುವುದೇನಯ್ಯ?
ಏನು ನೋಡಿದರೇನು ಏನು ಮಾಡಿದರೇನು
ಮನದೊಳಗಿನ ತಾಮಸ ಮಾಣದನ್ನಕ್ಕ
ಕೊಳಲ ದನಿಗೆ ಸರ್ಪ ತಲೆದೂಗುವಂದದಿ
ಇದಕೇನು ಮದ್ದು ಪುರಂದರ ವಿಠಲ?
Filed under: ಉಗಾಭೋಗ, ಬ | Tagged: ಉಗಾಭೋಗ, ಬ, ugabhoga | Leave a Comment »
Posted on February 22, 2008 by neelanjana
ಪಲ್ಲವಿ:
ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ ವೇಂಕಟರಮಣಗಾರತಿ ಎತ್ತಿರೆ
ಚರಣ:
1:
ಮತ್ಸ್ಯಾವತಾರಗೆ ಮಂದರೋದ್ಧಾರಗೆ ಅಚ್ಚರಿಯಿಂದ ಭೂಮಿ ತಂದವಗೆ
ಹೆಚ್ಚಾದ ಉಕ್ಕಿನ ಕಂಭದಿಂದಲಿ ಬಂದ ಲಕ್ಶ್ಮೀ ನರಸಿಂಹಗಾರತಿ ಎತ್ತಿರೆ
2:
ವಾಮನ ರೂಪಲಿ ದಾನ ಬೇಡಿದವಗೆ ಪ್ರೇಮದಿ ಕೊಡಲಿಯ ಪಿಡಿದವಗೆ
ರಾಮಚಂದ್ರನಾಗಿ ದಶ ಶಿರನನು ಕೊಂದ ಸ್ವಾಮಿ ಶ್ರೀ ಕೃಷ್ಣಗಾರತಿ ಎತ್ತಿರೆ
3:
ಬತ್ತಲೆ ನಿಂತಗೆ ಬೌದ್ಧಾವತಾರಗೆ ಉತ್ತಮ ಅಶ್ವನೇರಿದಗೆ
ಭಕ್ತರ ಸಲಹುವ ಪುರಂದರ ವಿಟ್ಠಲಗೆ ಮುತ್ತೈದೆಯರಾರತಿ ಎತ್ತಿರೆ
Filed under: ದಶಾವತಾರ, ಪ | Tagged: ದಶಾವತಾರ, ಪ, dashavatara | Leave a Comment »