ಪಲ್ಲವಿ
ಅಂಗಿ ತೊಟ್ಟೇನೆ ಗೋಪಿ ಶೃಂಗಾರವಾದೇನೆ ಹಾಲ ಕುಡಿದೇನೆ ಗೋಪಿ ಆಕಳ ಕಾಯ್ದೇನೆ
ಚರಣ:
1:
ಚಕ್ಕುಲಿ ಕೊಡು ಎನಗೆ ಗೋಪಿ
ಅಕ್ಕರದಿ ಬಂದೆನೆ ಗೊಲ್ಲರ
ಮಕ್ಕಳ ಎಲ್ಲರೊಡ ಗೂಡಿ ಹಲವು
ಗೋವ್ಗಳ ಕಾಯ್ದು ಬಂದೆನೆ
2:
ಅಮ್ಮಣ್ಣಿ ಕೊಡು ಎನಗೆ ಗೋಪಿ
ಬೆಣ್ಣೆಯ ತೋರೆ ಮೇಲೆ
ಗಮ್ಮನೆ ತಟಕನೆ ಮೊಸರನೆ ಸವಿದು
ಸುಮ್ಮನೆ ತೊಟ್ಟಿಲೊಳು ಲೋಲಾಡುವೆನು
3:
ಅಪ್ಪಚ್ಚಿ ಕೊಡು ಎನಗೆ ಗೋಪಿ
ತುಪ್ಪವ ಕೊಡೆ ಮೇಲೆ
ಅಪ್ಪಗೆ ಹೇಳಿ ಟೊಪ್ಪಿಗೆ ಕೊಡಿಸೆ
ಉಪ್ಪು ಕಡಲೆಯನ್ನು ಚೀಲದಿ ತುಂಬುವೆ
4:
ಚೆಂಡು ಕೊಡು ಎನಗೆ ಗೋಪಿ
ಚಿನಿಕೋಲು ಬೇಕಲ್ಲ
ಗುಂಡು ಕಲ್ಲಿನಂಥ ಬುತ್ತಿಯ ಕಟ್ಟಿ
ಹಿಂಡು ಗೋವುಗಳ ಕಾಯ್ದು ಬಂದೆನೆ
5:
ಈ ಲೀಲೆಗಳ ಕೇಳಿ ಗೋಪಿ
ತೋಳಿನೊಳ್ ಬಿಗಿದಪ್ಪಿ
ಶ್ರೀಲೋಲ ಪುರಂದರ [...]
Filed under: ಅಂ | Tagged: ಅ, ಅಂ, ಕೃಷ್ಣನ ಬಾಲ ಲೀಲೆ, ಕೃಷ್ಣಲೀಲೆ, ವಾತ್ಸಲ್ಯ ಭಾವ | Leave a Comment »