• ದಾಸರ ದರ್ಶನ ಮಾಡಿದ ಕಂಗಳು!

  • ಪದಗಳು- ಮೊದಲ ಅಕ್ಷರದಿಂದ ಇಲ್ಲಿ ಹುಡುಕಿ

  • Top Posts

ನರನಾದ ಮೇಲೆ

ಪಲ್ಲವಿ:

ನರನಾದ ಮೇಲೆ ಹರಿ ನಾಮ ಜಿಹ್ವೆಯೊಳಿರಬೇಕು ||

ಚರಣಗಳು:


ಭೂತ ದಯಾಪರನಾಗಿರ ಬೇಕು |
ಪಾತಕವೆಲ್ಲವ ಕಳೆಯಲು ಬೇಕು |
ಮಾತು ಮಾತಿಗೆ ಹರಿಯೆನ್ನ ಬೇಕು ||1||

ಆರು ವರ್ಗವನಾಳಿಯಲು ಬೇಕು |
ಮೂರು ಗುಣಂಗಳ ಮೀರಲು ಬೇಕು |
ಸೇರಿ ಬ್ರಹ್ಮನೊಳು ಸುಖಿಸಲು ಬೇಕು ||2||

ಅಷ್ಟ ಮದಂಗಳ ತುಳಿಯಲು ಬೇಕು |
ದುಷ್ಟರ ಸಂಗವ ಬಿಡಲು ಬೇಕು |
ಕೃಷ್ಣ ಕೇಶವ ಎನ್ನಬೇಕು ||3||

ವೇದ ಶಾಸ್ತ್ರವನೋದಲು ಬೇಕು |
ಭೇದಹಂಕಾರವ ನೀಗಲು ಬೇಕು |
ಮಾಧವ ಸ್ಮರಣೆಯೊಳಿರಬೇಕು ||4||

ಶಾಂತಿ ಕ್ಷಮೆ ದಯೆ ಪಿಡಿಯಲು ಬೇಕು |
ಭ್ರಾಂತಿ ಕ್ರೋಧವ ಕಳೆಯಲು ಬೇಕು |
ಸಂತರ ಸಂಗದಿ ರತಿಯಿರಬೇಕು ||5||

ಗುರುವಿನ ಚರಣಕ್ಕೆರಗಲುಬೇಕು |
ತರುಣೋಪಾಯವನರಿಯಲುಬೇಕು |
ವಿರಕ್ತಿ ಮಾರ್ಗದಲಿರಬೇಕು ||6||

ಬಂದದ್ದುಂಡು ಸುಖಿಸಲುಬೇಕು |
ನಿಂದಾ ಸ್ತುತಿಗಳ ತಾಳಲುಬೇಕು |
ತಂದೆ ಪುರಂದರ ವಿಟ್ಟಲನೆನಬೇಕು ||7||

Leave a Reply