• ದಾಸರ ದರ್ಶನ ಮಾಡಿದ ಕಂಗಳು!

  • ಪದಗಳು- ಮೊದಲ ಅಕ್ಷರದಿಂದ ಇಲ್ಲಿ ಹುಡುಕಿ

  • Top Posts

ಹರಿ ಸ್ಮರಣೆ ಮಾಡೋ ನಿರಂತರ

ಪಲ್ಲವಿ
ಹರಿ ಸ್ಮರಣೆ ಮಾಡೋ ನಿರಂತರ ಪರಗತಿಗೆ ಇದು ನಿರ್ಧಾರ
ಚರಣ
1. ದುರಿತ ಗಜಕ್ಕೆ ಕಂಠೀರವನೆನಿಸಿದ ಶರಣಾಗತ ರಕ್ಷಕ ಪಾವನ ನೀ
2. ಸ್ಮರಣೆಗೈದ ಪ್ರಹ್ಲಾದನ ರಕ್ಷಿಸಿದ ದುರುಳ ಹಿರಣ್ಯಕನುದರವ ಸೀಳಿದ
3. ತರುಣಿ ದ್ರೌಪದಿ ಮೊರೆಯಿಡಲಾಕ್ಷಣ ಭರದಿಂದಕ್ಷಯವಿತ್ತ ಮಹಾತ್ಮನ
4. ಅಂದು ಅಜಾಮಿಳ ಕಂದನ ಕರೆಯಲು ಬಂದು ಸಲಹಿ ಆನಂದವ ತೋರಿದ
5. ಶ್ರೀಶ ಪುರಂದರ ವಿಟ್ಠಲ ರಾಯನ ಸೃಷ್ಟಿಗೊಡೆಯನ ಮುಟ್ಟಿ ಭಜಿಸಿ ನೀ

ಕೇಳಲೊಲ್ಲನೆ ಎನ್ನ ಮಾತನು

ಪಲ್ಲವಿ:
ಕೇಳಲೊಲ್ಲನೆ ಎನ್ನ ಮಾತನು ರಂಗ ಕಾಳಿಯಮರ್ದನ ಕೃಷ್ಣಗೆ ಪೇಳೆ ಗೋಪ್ಯಮ್ಮ ಬುದ್ಧಿ
ಚರಣ :
1: ಬಿಟ್ಟ ಕಂಗಳ ಮುಚ್ಚಲೊಲ್ಲನೆ ಬೇಗ
ಬೆಟ್ಟಕ್ಕೆ ಬೆನ್ನೊಡ್ಡಿ ನಿಂತನೆ
ಸಿಟ್ಟಿಸಿ ಕೋರೆ ಹಲ್ಲ ತೋರ್ದನೆ ಅತಿ
ಗಟ್ಟಿ ಉಕ್ಕಿನ ಕಂಭವನೊಡೆದು ಬಂದನೆ
2: ಮೂರಡಿ ಭೂಮಿಯ ಬೇಡಿದನೆ ಅರಸರ
ಬೇರ ಕಡಿಯೆ ಕೊಡಲಿ ತಂದನೆ
ನಾರ ಸೀರೆಯನಿಟ್ಟುಕೊಂಡನೆ ಬೇಗ
ಚೋರತನದಿ ಹರವಿ ಹಾಲ ಕುಡಿದನಮ್ಮ
3: ಬತ್ತಲೆ ನಾರಿಯರನಪ್ಪಿದ ಬೇಗ
ಉತ್ತಮ ಅಶ್ವವ ಹತ್ತಿದ
ಹತ್ತವತಾರವ ತಾಳಿದ ನಮ್ಮ
ದಿಟ್ಟ ಮೂರುತಿ ಪುರಂದರ ವಿಟ್ಠಲ

ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ ?

ಪಲ್ಲವಿ :
ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ
ಅನುಪಲ್ಲವಿ:ಎಲ್ಲಿ ನೋಡಿದರಲ್ಲಿ ತಾನಿಲ್ಲದಿಲ್ಲವೆಂದು ಬಲ್ಲ ಜಾಣರು
ಚರಣ:
1: ನಂದಗೋಪನ ಮಂದಿರಗಳ ಸಂದುಗೊಂದಿನಲಿ
ಚಂದ ಚಂದದ ಗೋಪ ಬಾಲರ ವೃಂದ ವೃಂದದಲಿ
ಸುಂದರಾಂಗದ ಸುಂದರಿಯರ ಹಿಂದು ಮುಂದಿನಲಿ
ಅಂದದಾಕಳ ಕಂದ ಕರುಗಳ ಮಂದೆಮಂದೆಯಲಿ
2: ಶ್ರೀ ಗುರೂಕ್ತ ಸದಾ ಸುಮಂಗಳ ಯೋಗ ಯೋಗದಲಿ
ಆಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ
ಭಾಗವತರು ಸದಾ ಬಾಗಿ ಪಾಡುವ ರಾಗ ರಾಗದಲಿ
3: ಈ ಚರಾಚರದೊಳಗೆ ಜನಂಗಳ ಆಚೆ ಈಚೆಯಲಿ
ಖೇಚರೇಂದ್ರನ ಸುತನ ರಥದ ಚೌಕ ಪೀಠದಲಿ
ನಾಚದೆ ಮಾಧವ [...]