ಪಲ್ಲವಿ
ಹರಿ ಸ್ಮರಣೆ ಮಾಡೋ ನಿರಂತರ ಪರಗತಿಗೆ ಇದು ನಿರ್ಧಾರ
ಚರಣ
1. ದುರಿತ ಗಜಕ್ಕೆ ಕಂಠೀರವನೆನಿಸಿದ ಶರಣಾಗತ ರಕ್ಷಕ ಪಾವನ ನೀ
2. ಸ್ಮರಣೆಗೈದ ಪ್ರಹ್ಲಾದನ ರಕ್ಷಿಸಿದ ದುರುಳ ಹಿರಣ್ಯಕನುದರವ ಸೀಳಿದ
3. ತರುಣಿ ದ್ರೌಪದಿ ಮೊರೆಯಿಡಲಾಕ್ಷಣ ಭರದಿಂದಕ್ಷಯವಿತ್ತ ಮಹಾತ್ಮನ
4. ಅಂದು ಅಜಾಮಿಳ ಕಂದನ ಕರೆಯಲು ಬಂದು ಸಲಹಿ ಆನಂದವ ತೋರಿದ
5. ಶ್ರೀಶ ಪುರಂದರ ವಿಟ್ಠಲ ರಾಯನ ಸೃಷ್ಟಿಗೊಡೆಯನ ಮುಟ್ಟಿ ಭಜಿಸಿ ನೀ
Filed under: ಹ