• ದಾಸರ ದರ್ಶನ ಮಾಡಿದ ಕಂಗಳು!

  • ಪದಗಳು- ಮೊದಲ ಅಕ್ಷರದಿಂದ ಇಲ್ಲಿ ಹುಡುಕಿ

  • Top Posts

ಧರಣಿಗೆ ದೊರೆಯೆಂದು ನಂಬಿದೆ

ಪಲ್ಲವಿ:
ಧರಣಿಗೆ ದೊರೆಯೆಂದು ನಂಬಿದೆ ಇಂಥ
ಪರಮ ಲೋಭಿಯೆಂಬುದರಿಯೆ ಶ್ರೀ ಹರಿಯೆ
ಚರಣಗಳು:
ಕಾಡಿ ಬೇಡುವರಿಗೆ ಕೊಡಲಾರದೆ ಅಂಜಿ
ಓಡಿ ನೀರೊಳು ಸೇರಿಕೊಂಡೆ ಬೇಗ
ಹೇಡಿಯ ತೆರದಲಿ ಮೋರೆಯ ತೋರದೆ
ಓಡಿ ಅರಣ್ಯದಿ ಮೃಗಗಳ ಸೇರಿದೆ
ಬಡವರ ಬಿನ್ನಹ ಲಾಲಿಸದೆ ಹಲ್ಲ
ಕಡುಕೋಪದಲಿ ತೆರೆದಂಜಿಸಿದೆ
ತಡೆಯದೆ ಭಿಕ್ಷುಕನಾದರು ಬಿಡರೆಂದು
ಕೊಡಲಿಯ ಪಿಡಿದು ಕೋಡಗ ಹಿಂಡ ಕಾಯ್ದೆ
ಉತ್ತಮನೆಂದರೆ ಮತ್ತೆ ಚೋರನಾದೆ
ಬತ್ತಲೆ ನಿಂತೆ ತೇಜಿಯನೇರಿದೆ
ಎತ್ತ ಹೋದರು ಬಿಡೆ ಮತ್ತೆ ನಿನ್ನನು ದೇವ
ಚಿತ್ತಜ ಜನಕ ಶ್ರೀ ಪುರಂದರ ವಿಟ್ಠಲ

ದೇವ ಬಂದ ನಮ್ಮ

ಪಲ್ಲವಿ
ದೇವ ಬಂದ ನಮ್ಮ ಸ್ವಾಮಿ ಬಂದನೋ
ದೇವರ ದೇವ ಶಿಖಾಮಣಿ ಬಂದನೋ
ಚರಣಗಳು:
ಉರಗ ಶಯನ ಬಂದ ಗರುಡ ಗಮನ ಬಂದ
ನರಗೊಲಿದವ ಬಂದ ನಾರಾಯಣ ಬಂದ
ಮಂದರಧರ ಬಂದ ಮಾಮನೋಹರ ಬಂದ
ಬೃಂದಾವನಪತಿ ಗೋವಿಂದ ಬಂದನೋ
ಪಕ್ಷಿವಾಹನ ಬಂದ ಲಕ್ಷ್ಮಿ ರಮಣ ಬಂದ
ಅಕ್ಷಯ ಫಲದ ಲಕ್ಷ್ಮಣಾಗ್ರಜ ಬಂದ
ನಿಗಮಗೋಚರ ಬಂದ ನಿತ್ಯ ತೃಪ್ತನು ಬಂದ
ನಗೆಮುಖ ಪುರಂದರ ವಿಠಲ ಬಂದನೋ

ದಾಸನ ಮಾಡಿಕೊ ಎನ್ನ

ಪಲ್ಲವಿ:
ದಾಸನ ಮಾಡಿಕೊ ಎನ್ನ ಸ್ವಾಮಿ
ಸಾಸಿರ ನಾಮದ ವೆಂಕಟರಮಣ
ಚರಣ:
ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ
ಕರುಣ-ಕವಚವೆನ್ನ ತೊಡಿಸೊ
ಚರಣಸೇವೆ ಎನಗೆ ಕೊಡಿಸೊ ಅಭಯ
ಕರ ಪುಷ್ಪವನೆನ್ನ ಶಿರದಲ್ಲಿ ಮುಡಿಸೊ ||೧||
ದೃಢಭಕ್ತಿ ನಿನ್ನಲ್ಲಿ ಬೇಡಿ ನಾ
ಅಡಿಗೆರಗುವೆನಯ್ಯ ಅನುದಿನ ಪಾಡಿ
ಕಡೆಗಣ್ಣಲೇಕೆನ್ನ ನೊಡಿಬಿಡುವೆ
ಕೊಡು ನಿನ್ನ ಧ್ಯಾನವ ಮನಶುಚಿ ಮಾಡಿ ||೨||
ಮೊರೆಹೊಕ್ಕವರ ಕಾವ ಬಿರುದು ಎನ್ನ
ಮರೆಯದೆ ರಕ್ಷಣೆ ಮಾಡಯ್ಯ ಪೊರೆದು
ದುರಿತಗಳೆಲ್ಲವ ತರಿದು ಸಿರಿ
ಪುರಂದರ ವಿಠಲ ಎನ್ನನು ಪೊರೆದು ||೩||

ಡಂಗುರವ ಸಾರಿರಯ್ಯ

ಡಂಗುರವ ಸಾರಿರಯ್ಯ ಡಿಂಗರಿಗರೆಲ್ಲರು | ಭೂ
ಮಂಡಲಕ್ಕೆ ಪಾಂಡುರಂಗ ವಿಠ್ಠಲ ಪರದೈವವೆಂದು || ಪ ||
ಹರಿಯು ಮುಡಿದ ಹೂವು ಹರಿವಾಣದೊಳಗೆ ಇಟ್ಟುಕೊಂಡು ||
ಹರುಷದಿಂದ ಹಾಡಿ ಪಾಡಿ ಕುಣಿದು ಚಪ್ಪಾಳಿಕ್ಕುತ || ೧ ||
ಒಡಲು ಜಾಗಟೆಯ ಮಾಡಿ ನುಡಿವ ನಾಲಿಗೆ ಘಂಟೆ ಮಾಡಿ ||
ಬಿಡದೆ ಢಣಢಣಢಣರೆಂದು ಹೊಡೆದು ಚಪ್ಪಾಳಿಕ್ಕುತ || ೨ ||
ಇಂತು ಲೋಕಕ್ಕೆಲ್ಲ ಲಕ್ಷ್ಮೀಕಾಂತನಲ್ಲದಿಲ್ಲವೆಂದು ||
ಸಂತತ ಶ್ರೀಪುರಂದರವಿಠಲನೇ ಪರದೈವವೆಂದು || ೩ ||

ಬುತ್ತಿಯ ಕಟ್ಟೋ ಮನುಜ

ಪಲ್ಲವಿ:
ಬುತ್ತಿಯ ಕಟ್ಟೋ ಮನುಜ ಬುತ್ತಿಯ ಕಟ್ಟೋ
ಅನುಪಲ್ಲವಿ:
ಬುತ್ತಿಯನ್ನು ಕಟ್ಟಿದರೆ ಎತ್ತಲಾದರು ಉಣಬಹುದು
ಚರಣಗಳು:
1.
ಧರ್ಮವೆಂಬ ಮಡಿಕೆಯಲ್ಲಿ ನಿರ್ಮಲ ಮನ ಗಂಗೆ ತುಂಬಿ
ಸುಮ್ಮಾನದುರಿಯ ಹಚ್ಚಿ ಒಮ್ಮಾನಕ್ಯನ್ನವಾಗಿ
2:
ಅರಿವು ಎಂಬ ಅರಿವೆ ಹಾಸಿ ಹರಿವಿಹಾಲ ಮೊಸರ ತಳಿದು
ಪರಮ ವೈರಾಗ್ಯದಿಂದಲೆ ಶ್ರೀ ಹರಿಗೆ ಅರ್ಪಿತವೆಂದು
3:
ಕರ್ತು ಪುರಂದರ ವಿಟ್ಟಲ ತತ್ವವೆಂಬ ಬುತ್ತಿಯನು
ಹತ್ತಿರ ತಂದಿಟ್ಟು ಕೊಂಡು ನಿತ್ಯ ಉಂಡು ತೃಪ್ತಿ ಪಡಿರೊ

ಇದೇ ಸಮಯ ರಂಗ

ಪಲ್ಲವಿ:

ಇದೇ ಸಮಯ ರಂಗ ಬಾರೆಲೊ ಇದೇ ಸಮಯ ಕೃಷ್ಣ ಬಾರೆಲೊ
ಚರಣಗಳು:
1: ಅತ್ತಿಗೆ ಲಕ್ಷಬತ್ತಿ ಶೀಲಳೋ ಅಷ್ಟು ಆಗದೆ ಅವಳೇಳಳೋ
ಅತ್ತೆ ಪುರಾಣದಿ ಲೋಲಳೊ ಸರಿ ಹೊತ್ತಿನ ವೇಳೆಗೆ ಬರುವಳೋ
2: ಮಾವ ಎನ್ನಲಿ ಅವಿಶ್ವಾಸಿಯೋ ಮದುವೆಯಾದ ಗಂಡ ಉದಾಸಿಯೋ
ಭಾವನು ಎನ್ನ ಸೇರ ಹೇಸಿಯೋ ನೀನೀ ವೇಳೆಗೆ ಬಂದರೆ ವಾಸಿಯೋ
3: ತಂದೆ ತಾಯಿ ಆಸೆ ಮಾಡೆನೊ ಎನ್ನ ಕಂದನ ಮೇಲೆ ಮನಸಿಡೆನೊ
ಮಂದರಧರ ಪುರಂದರ ವಿಟ್ಠಲ ನೀ ಬಂದರೆ ಚರಣ ಸೇವೆ ಮಾಳ್ಪೆನೋ

ಬಾ ಬಾ ರಂಗ

ಪಲ್ಲವಿ:
ಬಾ ಬಾ ರಂಗ ಭುಜಂಗ ಶಯನ ಕೋಮಲಾಂಗ ಕೃಪಾಂಗ
ಅನುಪಲ್ಲವಿ:
ಬಾ ಬಾ ಎನ್ನಂತರಂಗ ಮಲ್ಲರ ಗಜ ಸಿಂಗ ದುರಿತ ಭವ ಭಂಗ
ಚರಣಗಳು:

ಉಭಯ ಕಾವೇರಿಯ ಮಧ್ಯ ನಿವಾಸ ಅಭಯ ದಾಯಕ ಮಂದಹಾಸ
ಸಭೆಯೊಳು ಸತಿಯಳ ಕಾಯ್ದ ಉಲ್ಲಾಸ ಇಭ ವರದನೆ ಶ್ರೀನಿವಾಸ
ಏಳು ಪ್ರಾಕಾರದ ಮಾಳಿಗೆ ಮನೆಯೊಳಗೆ ಕಾಳಿಯ ದೇವರ ದೇವ
ಸೋಳ ಸಾಸಿರ ಗೋಪಿಯರಾಳಿದ ಈರೇಳು ಲೋಕದ ಜನಕಾವ
ಚಂದ್ರ ಪುಷ್ಕರಿಣಿಯ ತೀರ ವಿಹಾರ ಇಂದ್ರಾದಿ ಸುರ ಪರಿವಾರ
ಚಂದ್ರಶೇಖರನುತನಾದ ಸುಖಸಾಂದ್ರ ಸುಗುಣ ಗಂಭೀರ
ರಕ್ಷಣ ತ್ರಯಗಳ ದೂಷಿತ ನಿರತ ಅಶೇಷ ವಿಭವ ಜನಪಾಲ
ಭೂಷಿತ ನಾನಾ [...]

ಅಂಗನೆಯರೆಲ್ಲ ನೆರೆದು

ಪಲ್ಲವಿ:
ಅಂಗನೆಯರೆಲ್ಲ ನೆರೆದು ಚಪ್ಪಾಳಿಕ್ಕುತ ದಿವ್ಯ
ಮಂಗಳ ನಾಮವ ಪಾಡಿ ರಂಗನ ಕುಣಿಸುವರು
ಚರಣ
1:
ಪಾಡಿ ಮಲ್ಹಾರಿ ಭೈರವಿ ಸಾರಂಗ ದೇಶಿ ಗುಂಡಕ್ರಿಯ ಗುರ್ಜರಿ ಕಲ್ಯಾಣಿ ರಾಗದಿ ತಂಡ
ತಂಡದಲಿ ನೆರೆದು ರಂಗನ ಉಡಿಯ ಘಂಟೆ ಘಣ್ ಘಣ್ ಘಣ್ ಘಣಿರೆಂದು ಹಿಡಿದು ಕುಣಿಸುವರು
2:
ತಿತ್ತಿರಿ ಮೇಳರಿ ತಾಳ ದಂಡಿಗೆ ಮದ್ದಲೆ ಉತ್ತಮದ ಶಂಖ ಶಬ್ದ ನಾದಗಳಿಂದ
ಸುತ್ತ ಮುತ್ತಿ ನಾರಿಯರ ತತ್ತೈ ತತ್ತೈ ಥಾಯೆಂದು ಅರ್ತಿಯಿಂದ ಕುಣಿಸುವರು ಪರವಸ್ತುವ ಹಿಡಿದು
3:
ಕಾಮಿನಿಯರೆಲ್ಲ ನೆರೆದು ಕಂದನಾಟಗಳನಾಡಿ ಪ್ರೇಮದಿಂದ ಬಿಗಿದಪ್ಪಿ ಮುದ್ದಾಡಿ
ಕಾಮಿತ ಫಲವೀವ ಭಕುತ ಜನರೊಡೆಯ ಸ್ವಾಮಿ ಪುರಂದರ ವಿಟ್ಠಲರಾಯನ್ನ

ಅಂಬಿಗ ನಾ ನಿನ್ನ ನಂಬಿದೆ

ಪಲ್ಲವಿ:
ಅಂಬಿಗ ನಾ ನಿನ್ನ ನಂಬಿದೆ ಜಗದಂಬಾರಮಣನ ನಂಬಿದೆ
ಚರಣ:
1:
ತುಂಬಿದ ಹರಿಗೋಲಂಬಿಗ ಅದಕೊಂಭತ್ತು ಛಿದ್ರವು ಅಂಬಿಗ
ಸಂಭ್ರಮದಿಂ ನೋಡಂಬಿಗ ಅದರಿಂಬು ನೋಡಿ ನಡೆಸಂಬಿಗ
2:
ಹೊಳೆವ ಭರವ ನೋಡಂಬಿಗ ಅದಕೆ ಸೆಳವು ಘನವಯ್ಯ ಅಂಬಿಗ
ಸುಳಿಯೊಳು ಮುಳುಗಿದೆ ಅಂಬಿಗ ಎನ್ನ ಸೆಳೆದು ಕೊಂಡೊಯ್ಯೊ ನೀನಂಬಿಗ
3:
ಆರು ತೆರೆಯ ನೋಡಂಬಿಗ ಅದು ಮೀರಿ ಬರುತಲಿದೆ ಅಂಬಿಗ
ಯಾರಿಂದಲಾಗದು ಅಂಬಿಗ ಅದ ನಿವಾರಿಸಿ ದಾಟಿಸೋ ಅಂಬಿಗ
4:
ಸತ್ಯವೆಂಬುವ ಹುಟ್ಟು ಅಂಬಿಗ ಸದಾ ಭಕ್ತಿಯೆಂಬುದೆ ಪಥ ಅಂಬಿಗ
ನಿತ್ಯ ಮೂರುತಿ ಪುರಂದರ ವಿಟ್ಠಲ ನಮ್ಮ ಮುಕ್ತಿ ಮಂಟಪಕೊಯ್ಯೊ ಅಂಬಿಗ

ಒಲ್ಲೆನೆ ವೈದಿಕ ಗಂಡನ

ಒಲ್ಲೆನೆ ವೈದಿಕ ಗಂಡನ ಎಲ್ಲಾದರೂ ನೀರ ಧುಮುಕುವೆನಮ್ಮ || ಪಲ್ಲವಿ ||
ಉಟ್ಟೇನೆಂದರೆ ಇಲ್ಲ, ತೊಟ್ಟೇನೆಂದರೆ ಇಲ್ಲ, ಕೆಟ್ಟ ಸೀರೆಯನು ನಾನು ಉಡಲಾರೆನೇ
ಹಿಟ್ಟು ತೊಳಸಿ ಎನ್ನ ರಟ್ಟೆಲ್ಲ ನೊಂದವು ಎಷ್ಟಂತ ಹೇಳಲಿ ಕಷ್ಟದ ಒಗೆತನ || ಚರಣ ೧ ||
ಕೃಷ್ಣಾಜಿವನ್ನು ರಟ್ಟೇಲಿ ಹಾಕಿಕೊಂಡು ಬೆಟ್ಟಲ್ಲಿ ಗಿಂಡಿಯ ಹಿಡಿದಿಹನೇ
ದಿಟ್ಟತನದಿ ನಾನೆದುರಿಗೆ ಹೋದರೆ ದೃಷ್ಟಿಯಿಂದಲಿ ಎನ್ನ ನೋಡನಮ್ಮ || ಚರಣ ೨ ||
ನಿನ್ನಾಣೆ ಹುಸಿಯಲ್ಲ, ಬಿನ್ನಾಣ ಮಾತಲ್ಲ, ಕಣ್ಣುಸನ್ನೆಯಂತು ಮೊದಲೆ ಇಲ್ಲಾ,
ಮುನ್ನಿನ ಜನ್ಮದಲ್ಲಿ ಪುರಂದರ ವಿಠಲನ ಚೆನ್ನಾಗಿ ಪೂಜೆಯ ಮಾಡಲಿಲ್ಲಮ್ಮಾ || [...]