ಪಲ್ಲವಿ:
ಬಂದ ನೋಡಿ ಗೋವಿಂದ ಕೃಷ್ಣ
ಅನುಪಲ್ಲವಿ:
ಬಂದ ಆನಂದ ತೀರ್ಥ ಮುನೀಂದ್ರ ವಂದ್ಯ ಹರಿ ನಂದ ಮುಕುಂದನು
ಚರಣ:
1: ಸರಸಿಜಾಕ್ಷ ದೊರೆಯೆ ಸರ್ವರ ಪೊರೆವ ದಯಾನಿಧಿಯೆ
ಕರಿಯ ವರನ ಚಕ್ರದಿ ಉದ್ಧರಿಸಿದ ಹರಿ ನಮ್ಮ ಪಾಲಿಪ ಪಾಲ್ಗಡಲೊಡೆಯನು
2: ಇಂದ್ರದೇವ ವಂದ್ಯ ಇಶ್ಟರೈಂದು ಕಾವ್ಯ ನಿತ್ಯಾನಂದ
ಚಂದ್ರ ಕೋಟಿ ಲಾವಣ್ಯ ಮುಖದಲಿ ಸುಂದರ ಅರಳೆಲ ಹಾರಗಳಿಂದಲಿ
3: ಚರಣ ಕಮಲಕಾಂತೆ ಸರ್ವದಾ ಮಾಳ್ಪುದು ದಯವಂತೆ
ತರತರ ಜನರಿಗೆ ಕರೆದು ವರವನೀವ ಸರಸಿಜಾಕ್ಷ ನಮ್ಮ ಪುರಂದರ ವಿಟ್ಠಲನು
Filed under: ಬ | Tagged: krishna | Leave a Comment »