ಆದದ್ದೆಲ್ಲ ಒಳಿತೆ ಆಯಿತು, ನಮ್ಮ
ಶ್ರೀಧರನ ಸೇವೆಗೆ ಸಾಧನ ಸಂಪತ್ತಾಯಿತು
ಚರಣಗಳು:
ದಂಡಿಗೆ ಬೆತ್ತ ಹಿಡಿಯುವುದಕ್ಕೆ ಮಂಡೆ ಮಾಚಿ ನಾಚುತಿದ್ದೆ
ಹೆಂಡತಿ ಸಂತತಿ ಸಾವಿರವಾಗಲಿ ದಂಡಿಗೆ ಬೆತ್ತ ಹಿಡಿಸಿದಳಯ್ಯ
ಗೋಪಾಳ ಬುಟ್ಟಿ ಹಿಡಿಯುವುದಕ್ಕೆ ಭೂಪತಿಯಂತೆ ಗರ್ವಿಸುತಿದ್ದೆ
ಆ ಪತ್ನಿ ಕುಲ ಸಾವಿರವಾಗಲಿ ಗೋಪಾಳ ಬುಟ್ಟಿ ಹಿಡಿಸಿದಳಯ್ಯ
ತುಳಸಿ ಮಾಲೆಯ ಹಾಕುವುದಕ್ಕೆ ಅರಸನಾಗಿ ನಾಚುತಿದ್ದೆ
ಸರಸಿಜಾಕ್ಷ ಪುರಂದರ ವಿಟ್ಠಲನು ತುಳಸಿ ಮಾಲೆ ಹಾಕಿಸಿದನಯ್ಯ
Filed under: ಆ