ತಂಗಾಳಿ ವಶವಲ್ಲವೇ ||ಪ||
ಅಂಗದೊಳಗೆ ಬೆಳದಿಂಗಳು ತುಂಬಿತು ||ಅ.ಪ||
ಚಂದನದಿಂದ ಕುಚಂಗಳ ತವಿಸಲು ಇಂದುಕಿರಣ ಬಂದು ಕಂದಿಸಲು
ಮಂದ ಮಾರುತದಲಿ ನಿಂದಿರಲಾರೆನೇ ಹೊಂದಿದ ತಾಪವು ಹೋಹುದೇನೆ ಹೆಣ್ಣೇ ||ಚ1||
ಬಂಗಾರವೊಡಲಿಗೆ ಭಾರವಾಗಿದೆಯೇ ಶೃಂಗರಿಸಕೊಳ ಸೇರಲಿಲ್ಲ
ಅಂಗಜ ಶರತಾಪ ತಾಳಲಾರೆ ನಾನು ಉಂಗುರವು ನಿನಗೆ ಉಚಿತವೇನೇ ಹೆಣ್ಣೇ||ಚ 2||
ಮುನ್ನ ಪುರಂದರ ವಿಠಲರಾಯ ಕೂಡಿ ಇನ್ನೂ ಬಾರೆಂದರೆ ಬಾರನೇಕೆ
ಅನ್ನ ಪಾನ ರುಚಿಯಾಗಿ ತೋರಲಿಲ್ಲ ನಿನ್ನಾಣೆ ಕಣ್ಣಿಗೆ ನಿದ್ರೆ ಬಾರದು ಹೆಣ್ಣೇ ||ಚ 3||
* ಇದೊಂದು ನಾಯಕೀ ಭಾವದ ರಚನೆ. ದಾಸರು ಪುರಂದರ ವಿಠಲನನ್ನು ಕಾಯುತ್ತಿರುವ ಹೆಣ್ಣೊಬ್ಬಳು, ತನ್ನ [...]
Filed under: ಅಂ, ತ | Tagged: ನಾಯಕೀ ಭಾವ, ವಿರಹ, ಶೃಂಗಾರ, SrngAra | No Comments »