Posted on July 15, 2008 by neelanjana
ಪಲ್ಲವಿ
ದೇವ ಬಂದ ನಮ್ಮ ಸ್ವಾಮಿ ಬಂದನೋ
ದೇವರ ದೇವ ಶಿಖಾಮಣಿ ಬಂದನೋ
ಚರಣಗಳು:
ಉರಗ ಶಯನ ಬಂದ ಗರುಡ ಗಮನ ಬಂದ
ನರಗೊಲಿದವ ಬಂದ ನಾರಾಯಣ ಬಂದ
ಮಂದರಧರ ಬಂದ ಮಾಮನೋಹರ ಬಂದ
ಬೃಂದಾವನಪತಿ ಗೋವಿಂದ ಬಂದನೋ
ಪಕ್ಷಿವಾಹನ ಬಂದ ಲಕ್ಷ್ಮಿ ರಮಣ ಬಂದ
ಅಕ್ಷಯ ಫಲದ ಲಕ್ಷ್ಮಣಾಗ್ರಜ ಬಂದ
ನಿಗಮಗೋಚರ ಬಂದ ನಿತ್ಯ ತೃಪ್ತನು ಬಂದ
ನಗೆಮುಖ ಪುರಂದರ ವಿಠಲ ಬಂದನೋ
Filed under: ದ | Tagged: ದ | No Comments »
Posted on July 15, 2008 by neelanjana
ಪಲ್ಲವಿ:
ದಾಸನ ಮಾಡಿಕೊ ಎನ್ನ ಸ್ವಾಮಿ
ಸಾಸಿರ ನಾಮದ ವೆಂಕಟರಮಣ
ಚರಣ:
ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ
ಕರುಣ-ಕವಚವೆನ್ನ ತೊಡಿಸೊ
ಚರಣಸೇವೆ ಎನಗೆ ಕೊಡಿಸೊ ಅಭಯ
ಕರ ಪುಷ್ಪವನೆನ್ನ ಶಿರದಲ್ಲಿ ಮುಡಿಸೊ ||೧||
ದೃಢಭಕ್ತಿ ನಿನ್ನಲ್ಲಿ ಬೇಡಿ ನಾ
ಅಡಿಗೆರಗುವೆನಯ್ಯ ಅನುದಿನ ಪಾಡಿ
ಕಡೆಗಣ್ಣಲೇಕೆನ್ನ ನೊಡಿಬಿಡುವೆ
ಕೊಡು ನಿನ್ನ ಧ್ಯಾನವ ಮನಶುಚಿ ಮಾಡಿ ||೨||
ಮೊರೆಹೊಕ್ಕವರ ಕಾವ ಬಿರುದು ಎನ್ನ
ಮರೆಯದೆ ರಕ್ಷಣೆ ಮಾಡಯ್ಯ ಪೊರೆದು
ದುರಿತಗಳೆಲ್ಲವ ತರಿದು ಸಿರಿ
ಪುರಂದರ ವಿಠಲ ಎನ್ನನು ಪೊರೆದು ||೩||
Filed under: ದ | Tagged: ದ, ದಾಸ, ವೆಂಕಟರಮಣ | No Comments »
Posted on June 9, 2008 by neelanjana
ಪಲ್ಲವಿ
ದಯಮಾಡೋ ರಂಗ ದಯಮಾಡೋ
ದಯಮಾಡೋ ನಿನ್ನ ದಾಸನೆಂದೆಣಿಸಿ
ಅನುಪಲ್ಲವಿ
ಹಲವು ಕಾಲದಿ ನಿನ್ನ ಹಂಬಲ ಎನಗೆ
ಒಲಿದು ಪಾಲಿಸಬೇಕು ವಾರಿಜನಾಭ
ಚರಣಗಳು:
ಇಹ ಪರ ಗತಿ ನೀನೇ ಇಂದಿರ ರಮಣ
ಸಹಾಯ ನಿನ್ನದೆ ಸರ್ವದಾ ತೋರಿ ಕರುಣ ||೧||
ಕರಿರಾಜ ವರದನೇ ಕಾಮಿತ ಫಲದ
ಪುರಂದರವಿಠಲ ಹರಿ ಸಾರ್ವಭೌಮ ||೨||
Filed under: ದ | No Comments »