Posted on July 15, 2008 by neelanjana
ಪಲ್ಲವಿ:
ಧರಣಿಗೆ ದೊರೆಯೆಂದು ನಂಬಿದೆ ಇಂಥ
ಪರಮ ಲೋಭಿಯೆಂಬುದರಿಯೆ ಶ್ರೀ ಹರಿಯೆ
ಚರಣಗಳು:
ಕಾಡಿ ಬೇಡುವರಿಗೆ ಕೊಡಲಾರದೆ ಅಂಜಿ
ಓಡಿ ನೀರೊಳು ಸೇರಿಕೊಂಡೆ ಬೇಗ
ಹೇಡಿಯ ತೆರದಲಿ ಮೋರೆಯ ತೋರದೆ
ಓಡಿ ಅರಣ್ಯದಿ ಮೃಗಗಳ ಸೇರಿದೆ
ಬಡವರ ಬಿನ್ನಹ ಲಾಲಿಸದೆ ಹಲ್ಲ
ಕಡುಕೋಪದಲಿ ತೆರೆದಂಜಿಸಿದೆ
ತಡೆಯದೆ ಭಿಕ್ಷುಕನಾದರು ಬಿಡರೆಂದು
ಕೊಡಲಿಯ ಪಿಡಿದು ಕೋಡಗ ಹಿಂಡ ಕಾಯ್ದೆ
ಉತ್ತಮನೆಂದರೆ ಮತ್ತೆ ಚೋರನಾದೆ
ಬತ್ತಲೆ ನಿಂತೆ ತೇಜಿಯನೇರಿದೆ
ಎತ್ತ ಹೋದರು ಬಿಡೆ ಮತ್ತೆ ನಿನ್ನನು ದೇವ
ಚಿತ್ತಜ ಜನಕ ಶ್ರೀ ಪುರಂದರ ವಿಟ್ಠಲ
Filed under: ದಶಾವತಾರ, ಧ | Tagged: ದಶಾವತಾರ, ಧ | No Comments »
Posted on May 23, 2008 by neelanjana
ಧಣಿಯ ನೋಡಿದೆನಾ ವೆಂಕಟನ ಮನ-
ದಣಿಯೇ ನೋಡಿದೆನಾ! ||ಪಲ್ಲವಿ||
ಧಣಿಯ ನೋಡಿದೆ ಶಿಖಾಮಣಿ ತಿರುಮಲನಾ! ||ಅನುಪಲ್ಲವಿ||
ಕೇಸಕ್ಕಿ ಅನ್ನ ಉಂಬುವನಾ ಬಡ್ಡಿ
ಕಾಸು ಬಿಡದೇ ಹೊನ್ನ ಗಳಿಸುವನಾ!
ದೋಸೆ ಅನ್ನವ ಮಾರಿಸುವನಾ ತನ್ನ
ದಾಸರ ಮ್ಯಾಳದಿ ಕುಣಿದಾಡುತಿಹನಾ! ||೧||
ಬೆಟ್ಟದೊಳಗೆ ಇರುತಿಹನ ಮನ
ಮುಟ್ಟಿ ಭಜಿಪರಿಗಿಷ್ಟವ ಸಲ್ಲಿಸುವನಾ!
ಕೊಟ್ಟ ವರವ ತಪ್ಪದವನ
ಸೃಷ್ಟಿಗಧಿಕ ಶ್ರೀ ಪುರಂದರ ವಿಠಲನ! ||೨||
Filed under: ಧ | No Comments »
Posted on February 11, 2008 by neelanjana
ಪಲ್ಲವಿ:
ಧರಣಿಗೆ ದೊರೆಯೆಂದು ನಂಬಿದೆ ಇಂಥ
ಪರಮ ಲೋಭಿಯೆಂಬುದರಿಯೆ ಶ್ರೀ ಹರಿಯೆ
ಚರಣಗಳು:
ಕಾಡಿ ಬೇಡುವರಿಗೆ ಕೊಡಲಾರದೆ ಅಂಜಿ
ಓಡಿ ನೀರೊಳು ಸೇರಿಕೊಂಡೆ ಬೇಗ
ಹೇಡಿಯ ತೆರದಲಿ ಮೋರೆಯ ತೋರದೆ
ಓಡಿ ಅರಣ್ಯದಿ ಮೃಗಗಳ ಸೇರಿದೆ
ಬಡವರ ಬಿನ್ನಹ ಲಾಲಿಸದೆ ಹಲ್ಲ
ಕಡುಕೋಪದಲಿ ತೆರೆದಂಜಿಸಿದೆ
ತಡೆಯದೆ ಭಿಕ್ಷುಕನಾದರು ಬಿಡರೆಂದು
ಕೊಡಲಿಯ ಪಿಡಿದು ಕೋಡಗ ಹಿಂಡ ಕಾಯ್ದೆ
ಉತ್ತಮನೆಂದರೆ ಮತ್ತೆ ಚೋರನಾದೆ
ಬತ್ತಲೆ ನಿಂತೆ ತೇಜಿಯನೇರಿದೆ
ಎತ್ತ ಹೋದರು ಬಿಡೆ ಮತ್ತೆ ನಿನ್ನನು ದೇವ
ಚಿತ್ತಜ ಜನಕ ಶ್ರೀ ಪುರಂದರ ವಿಟ್ಠಲ
Filed under: ದಶಾವತಾರ, ಧ | Tagged: ದಶಾವತಾರ | No Comments »