Posted on May 22, 2008 by neelanjana
ಪಲ್ಲವಿ :
ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ
ಅನುಪಲ್ಲವಿ:ಎಲ್ಲಿ ನೋಡಿದರಲ್ಲಿ ತಾನಿಲ್ಲದಿಲ್ಲವೆಂದು ಬಲ್ಲ ಜಾಣರು
ಚರಣ:
1: ನಂದಗೋಪನ ಮಂದಿರಗಳ ಸಂದುಗೊಂದಿನಲಿ
ಚಂದ ಚಂದದ ಗೋಪ ಬಾಲರ ವೃಂದ ವೃಂದದಲಿ
ಸುಂದರಾಂಗದ ಸುಂದರಿಯರ ಹಿಂದು ಮುಂದಿನಲಿ
ಅಂದದಾಕಳ ಕಂದ ಕರುಗಳ ಮಂದೆಮಂದೆಯಲಿ
2: ಶ್ರೀ ಗುರೂಕ್ತ ಸದಾ ಸುಮಂಗಳ ಯೋಗ ಯೋಗದಲಿ
ಆಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ
ಭಾಗವತರು ಸದಾ ಬಾಗಿ ಪಾಡುವ ರಾಗ ರಾಗದಲಿ
3: ಈ ಚರಾಚರದೊಳಗೆ ಜನಂಗಳ ಆಚೆ ಈಚೆಯಲಿ
ಖೇಚರೇಂದ್ರನ ಸುತನ ರಥದ ಚೌಕ ಪೀಠದಲಿ
ನಾಚದೆ ಮಾಧವ [...]
Filed under: ಪ | No Comments »
Posted on April 9, 2008 by neelanjana
ಪಲ್ಲವಿ:
ಪೋಗದಿರೆಲೋ ರಂಗ ಬಾಗಿಲಿಂದಾಚೆಗೆ
ಅನುಪಲ್ಲವಿ:
ಭಾಗವತರು ಕಂಡರೆ ಎತ್ತಿಕೊಂಡೊಯ್ವರೋ
ಚರಣ:
1. ಸುರ ಮುನಿಗಳು ತಮ್ಮ ಹೃದಯ ಗಹ್ವರದಲ್ಲಿ ಪರಮಾತ್ಮನ ಕಾಣದೆ ಅರಸುವರೊ
ದೊರಕದ ವಸ್ತುವಿಂದು ದೊರಕಿತು ತಮಗೆಂದು ಹರುಷದಿಂದಲಿ ನಿನ್ನ ಕರದೆತ್ತಿಕೊಂಬರು
2: ಅಗಣಿತ ಗುಣ ನಿನ್ನ ಜಗದ ನಾರಿಯರೆಲ್ಲ ಹಗೆಯಾಗಿ ನುಡಿವರೊ ಗೋಪಾಲನೆ
ಮಗುಗಳ ಮಾಣಿಕ್ಯ ತಗಲಿತು ಕರಕೆಂದು ಬೇಗದಿಂದಲಿ ಬಂದು ಬಿಗಿದಪ್ಪಿಕೊಂಬರೊ
3: ದಿಟ್ಟ ನಾರಿಯರೆಲ್ಲ ಇಷ್ಟವ ಸಲಿಸೆಂದು ಅಟ್ಟಟ್ಟಿ ಬೆನ್ಹಿಂದೆ ತಿರುಗುವರೊ
ಸೃಷ್ಟೀಶ ಪುರಂದರ ವಿಟ್ಠಲರಾಯನೆ ಇಷ್ಟಿಷ್ಟು ಬೆಣ್ಣೆಯ ಕೊಟ್ಟೇನೋ ರಂಗಯ್ಯ
Filed under: ಪ | Tagged: ಪ, ಪು | 1 Comment »
Posted on February 22, 2008 by neelanjana
ಪಲ್ಲವಿ:
ಪಂಕಜ ಮುಖಿಯರೆಲ್ಲರು ಬಂದು ಲಕ್ಷ್ಮೀ ವೇಂಕಟರಮಣಗಾರತಿ ಎತ್ತಿರೆ
ಚರಣ:
1:
ಮತ್ಸ್ಯಾವತಾರಗೆ ಮಂದರೋದ್ಧಾರಗೆ ಅಚ್ಚರಿಯಿಂದ ಭೂಮಿ ತಂದವಗೆ
ಹೆಚ್ಚಾದ ಉಕ್ಕಿನ ಕಂಭದಿಂದಲಿ ಬಂದ ಲಕ್ಶ್ಮೀ ನರಸಿಂಹಗಾರತಿ ಎತ್ತಿರೆ
2:
ವಾಮನ ರೂಪಲಿ ದಾನ ಬೇಡಿದವಗೆ ಪ್ರೇಮದಿ ಕೊಡಲಿಯ ಪಿಡಿದವಗೆ
ರಾಮಚಂದ್ರನಾಗಿ ದಶ ಶಿರನನು ಕೊಂದ ಸ್ವಾಮಿ ಶ್ರೀ ಕೃಷ್ಣಗಾರತಿ ಎತ್ತಿರೆ
3:
ಬತ್ತಲೆ ನಿಂತಗೆ ಬೌದ್ಧಾವತಾರಗೆ ಉತ್ತಮ ಅಶ್ವನೇರಿದಗೆ
ಭಕ್ತರ ಸಲಹುವ ಪುರಂದರ ವಿಟ್ಠಲಗೆ ಮುತ್ತೈದೆಯರಾರತಿ ಎತ್ತಿರೆ
Filed under: ದಶಾವತಾರ, ಪ | Tagged: ದಶಾವತಾರ, ಪ, dashavatara | No Comments »