• ದಾಸರ ದರ್ಶನ ಮಾಡಿದ ಕಂಗಳು!

  • ಪದಗಳು- ಮೊದಲ ಅಕ್ಷರದಿಂದ ಇಲ್ಲಿ ಹುಡುಕಿ

  • Top Posts

ಶಿವ ದರುಶನ ನಮಗಾಯಿತು

ಶಿವ ದರುಶನ ನಮಗಾಯಿತು ಕೇಳೆ
ಶಿವರಾತ್ರಿಯ ಜಾಗರಣೆ ||
ಪಾತಾಳ ಗಂಗೆಯ ಸ್ನಾನವ ಮಾಡಲು
ಪಾತಕವೆಲ್ಲ ಪರಿಹಾರವು
ಜ್ಯೋತಿರ್ಲಿಂಗನ ಧ್ಯಾನವ ಮಾಡಲು
ದ್ಯೂತಗಳಿಲ್ಲ ಅನುದಿನವು ||
ಬೇಡಿವ ವರಗಳ ಕೊಡುವನು ತಾಯಿ
ಬ್ರಹ್ಮನ ರಾಣಿಯ ನೋಡುವನು
ಆಡುತ ಪಾಡುತ ಏರುತ ಬಸವನ
ಆನಂದದಲಿ ನಲಿದಾಡುವನು ||
ಶಿಖರವ ಕಂಡೆನು ಪುರಂದರವಿಠಲನ
ಹರಿನಾರಾಯಣ ಧ್ಯಾನದಲೆ ||

ಶ್ರೀನಿವಾಸ ನೀನೇ ಪಾಲಿಸೋ

ಪಲ್ಲವಿ:
ಶ್ರೀನಿವಾಸ ನೀನೇ ಪಾಲಿಸೋ ಶೃತಜನ ಪಾಲ
ಗಾನಲೋಲ ಶ್ರೀ ಮುಕುಂದನೇ
ಅನುಪಲ್ಲವಿ:

ಧ್ಯಾನ ಮಾಳ್ಪ ಸಜ್ಜನರ ಮಾನದಿಂ ಪರಿಪಾಲಿಪ
ವೇಣುಗೋಪಾಲ ಮುಕುಂದ ವೇದವೇದ್ಯ ನಿತ್ಯಾನಂದ
ಚರಣ:

1:
ಎಂದಿಗೆ ನಿನ್ನ ಪಾದಾಬ್ಜವ ಪೊಂದುವ ಸುಖ
ಎಂದಿಗೆ ಲಭ್ಯವೋ ಮಾಧವ
ಅಂಧಕಾರಣ್ಯದಲ್ಲಿ ನಾನು (?)
ನಿಂದು ತತ್ತರಿಸುತಿಹೆನೊ ಮುಕುಂದ
2:
ಎಷ್ಟು ದಿನ ಕಷ್ಟ ಪಡುವುದೋ ಯಶೋದೆ ಕಂದ
ದೃಷ್ಟಿಯಿಂದ ನೋಡಲಾಗದೆ
ಮುಟ್ಟಿ ನಿನ್ನ ಭಜಿಸಲಾರೆ ಕೆಟ್ಟ ನರಜನ್ಮದವ
ದುಷ್ಟ ಕಾರ್ಯ ಮಾಡಿದಾಗ್ಯು ಇಷ್ಟನಾಗಿ ಕಯ್ಯ ಪಿಡಿದು
3:
ಅನುದಿನ ಅನೇಕ ರೋಗಂಗಳ ಅನುಭವಿಸುವೆನು
ಘನ ಮಹಿಮನೆ ಕೇಳಯ್ಯ ತನುವಿನಲ್ಲಿ ಬಲವಿಲ್ಲ
ನೆನೆದ ಮಾತ್ರ ಸಲಹುವ
ಹನುಮದೀಶ ಪುರಂದರ ವಿಟ್ಠಲನೇ ಕಯ್ಯ ಪಿಡಿದು